ರಾಜ್ಯ

ಧರ್ಮಸ್ಥಳ ಎಸ್‌ಐಟಿ ತನಿಖೆ; ರಾಜಕೀಯ ಬೇಡ: ಡಿಕೆಶಿ

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.

ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಮಗಿಂತ ಹೆಚ್ಚು ನಮ್ಮ ಶಾಸಕರು ಗೌರವ ಹೊಂದಿದ್ದಾರೆ. ನಮ್ಮ ಶಾಸಕಾಂಗ ಸಭೆಯಲ್ಲೂ ಭಕ್ತ-ಭಗವಂತನ ನಡುವಿನ ಸಂಬಂಧ ಹಾಳಾಗಬಾರದು ಎಂಬ ಚರ್ಚೆಯಾಗಿದೆ ಎಂದರು.

ಮಾತು ಬಿಡದ ಧರ್ಮಸ್ಥಳದ ಮಂಜುನಾಥ, ಕಾಸು ಬಿಡದ ತಿಮಪ್ಪ ಎಂಬ ಮಾತಿದೆ. ಧರ್ಮಸ್ಥಳದ ಬಗ್ಗೆ ನನಗೆ ನಂಬಿಕೆ, ಭಕ್ತಿ ಇದೆ. ಲಕ್ಷಾಂತರ ಭಕ್ತರು ಆರಾಧಿಸುತ್ತಾರೆ. ಅಲ್ಲಿ ಅನ್ನದಾಸೋಹ ನಡೆಯುತ್ತದೆ. ಅಲ್ಲಿ ನಡೆಯುತ್ತಿರುವ ಸೇವೆ ಬಗ್ಗೆ ಅನುಮಾನವಿಲ್ಲ. ಕ್ಷೇತ್ರದ ಬಗ್ಗೆಯಾಗಲಿ, ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಬಗ್ಗೆಯಾಗಲಿ ಅಲ್ಲಿನ ಪರಂಪರೆಯ ಬಗ್ಗೆ ನಿಮಗಿಂತ ಹೆಚ್ಚು ಕಾಳಜಿ ಇದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರವಾಗುತ್ತಿದೆ. ರೋಷ-ದ್ವೇಷ ಏನೂ ಇಲ್ಲ. ಧರ್ಮಸ್ಥಳದ ಬಗ್ಗೆ ನಮ್ಮ ನಂಬಿಕೆ ಅಚಲವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ಶಾಸಕ ಎಸ್.ಸುರೇಶ್‌ಕುಮಾರ್ ಮಾತನಾಡಿ, ಶಿವಕುಮಾರ್ ಭಕ್ತನಾಗಿ ಹೇಳಿದ್ದಾರೆಯೋ, ಡಿಸಿಎಂ ಆಗಿ ಹೇಳಿದ್ದಾರೋ ಗೊತ್ತಿಲ್ಲ. ಎಸ್‌ಐಟಿ ರಚನೆ ಮಾಡುವ ಹಿಂದಿನ ದಿನ ದಕ್ಷಿಣ ಕನ್ನಡ ಪೊಲೀಸರೇ ತನಿಖೆ ನಡೆಸಲು ದಕ್ಷರಾಗಿದ್ದಾರೆ ಎಂದು ಹೇಳಿದ್ದರು. ಸರ್ಕಾರದ ಹೇಳಿಕೆ ನೋಡಿದರೆ ಹೇಳಿಕೆಗೂ ನಡುವಳಿಕೆಗೂ ಸಂಬಂಧವಿಲ್ಲದಂತಾಗಿದೆ. ಅನಾಮಿಕನನ್ನು ಎಸ್‌ಐಟಿ ಕಸ್ಟಡಿಯಲ್ಲಿಟ್ಟುಕೊಳ್ಳಬೇಕು. ಧರ್ಮಸ್ಥಳಕ್ಕೆ ನುಗ್ಗುತ್ತೇವೆ ಎಂದು ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago