ರಾಜ್ಯ

ಧರ್ಮಸ್ಥಳ ಎಸ್‌ಐಟಿ ತನಿಖೆ; ರಾಜಕೀಯ ಬೇಡ: ಡಿಕೆಶಿ

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.

ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಮಗಿಂತ ಹೆಚ್ಚು ನಮ್ಮ ಶಾಸಕರು ಗೌರವ ಹೊಂದಿದ್ದಾರೆ. ನಮ್ಮ ಶಾಸಕಾಂಗ ಸಭೆಯಲ್ಲೂ ಭಕ್ತ-ಭಗವಂತನ ನಡುವಿನ ಸಂಬಂಧ ಹಾಳಾಗಬಾರದು ಎಂಬ ಚರ್ಚೆಯಾಗಿದೆ ಎಂದರು.

ಮಾತು ಬಿಡದ ಧರ್ಮಸ್ಥಳದ ಮಂಜುನಾಥ, ಕಾಸು ಬಿಡದ ತಿಮಪ್ಪ ಎಂಬ ಮಾತಿದೆ. ಧರ್ಮಸ್ಥಳದ ಬಗ್ಗೆ ನನಗೆ ನಂಬಿಕೆ, ಭಕ್ತಿ ಇದೆ. ಲಕ್ಷಾಂತರ ಭಕ್ತರು ಆರಾಧಿಸುತ್ತಾರೆ. ಅಲ್ಲಿ ಅನ್ನದಾಸೋಹ ನಡೆಯುತ್ತದೆ. ಅಲ್ಲಿ ನಡೆಯುತ್ತಿರುವ ಸೇವೆ ಬಗ್ಗೆ ಅನುಮಾನವಿಲ್ಲ. ಕ್ಷೇತ್ರದ ಬಗ್ಗೆಯಾಗಲಿ, ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಬಗ್ಗೆಯಾಗಲಿ ಅಲ್ಲಿನ ಪರಂಪರೆಯ ಬಗ್ಗೆ ನಿಮಗಿಂತ ಹೆಚ್ಚು ಕಾಳಜಿ ಇದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರವಾಗುತ್ತಿದೆ. ರೋಷ-ದ್ವೇಷ ಏನೂ ಇಲ್ಲ. ಧರ್ಮಸ್ಥಳದ ಬಗ್ಗೆ ನಮ್ಮ ನಂಬಿಕೆ ಅಚಲವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ಶಾಸಕ ಎಸ್.ಸುರೇಶ್‌ಕುಮಾರ್ ಮಾತನಾಡಿ, ಶಿವಕುಮಾರ್ ಭಕ್ತನಾಗಿ ಹೇಳಿದ್ದಾರೆಯೋ, ಡಿಸಿಎಂ ಆಗಿ ಹೇಳಿದ್ದಾರೋ ಗೊತ್ತಿಲ್ಲ. ಎಸ್‌ಐಟಿ ರಚನೆ ಮಾಡುವ ಹಿಂದಿನ ದಿನ ದಕ್ಷಿಣ ಕನ್ನಡ ಪೊಲೀಸರೇ ತನಿಖೆ ನಡೆಸಲು ದಕ್ಷರಾಗಿದ್ದಾರೆ ಎಂದು ಹೇಳಿದ್ದರು. ಸರ್ಕಾರದ ಹೇಳಿಕೆ ನೋಡಿದರೆ ಹೇಳಿಕೆಗೂ ನಡುವಳಿಕೆಗೂ ಸಂಬಂಧವಿಲ್ಲದಂತಾಗಿದೆ. ಅನಾಮಿಕನನ್ನು ಎಸ್‌ಐಟಿ ಕಸ್ಟಡಿಯಲ್ಲಿಟ್ಟುಕೊಳ್ಳಬೇಕು. ಧರ್ಮಸ್ಥಳಕ್ಕೆ ನುಗ್ಗುತ್ತೇವೆ ಎಂದು ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

30 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago