ರಾಜ್ಯ

ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಫ್ಯಾನ್ಸ್‌ ಬೆಂಬಲ; ಆ್ಯಕ್ಷನ್ ಪ್ರಿನ್ಸ್ ಹೇಳಿದ್ದೇನು?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಜೈಲು ಸೇರಿದೆ. ಈ ಹೈ ಪ್ರೊಫೈಲ್‌ ಕೇಸ್‌ನ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.

ಕನ್ನಡ ಚಿತ್ರರಂಗವು ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದೆ. ಸದ್ಯ ಈ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವಾಗಲೇ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್‌ವುಡ್‌ ಆಕ್ಷನ್‌ಪ್ರಿನ್ಸ್‌ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.

ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್‌ ಹಾಗೂ ತಂಡ ಬುಧವಾರ(ಜೂ. 26) ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ವೇಳೆ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.

ರೇಣುಕಾಸ್ವಾಮಿ ಕುಟುಂಬದವರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಮಗನ ಸಾವಿನಲ್ಲಿ ದಿನದೂಡುತ್ತಿರುವ ರೇಣಕುಸ್ವಾಮಿ ಕುಟುಬಂಕ್ಕೆ ಧ್ರುವಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

4 mins ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

24 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

39 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

1 hour ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

2 hours ago