ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಸೇರಿದೆ. ಈ ಹೈ ಪ್ರೊಫೈಲ್ ಕೇಸ್ನ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.
ಕನ್ನಡ ಚಿತ್ರರಂಗವು ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದೆ. ಸದ್ಯ ಈ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವಾಗಲೇ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್ವುಡ್ ಆಕ್ಷನ್ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.
ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡ ಬುಧವಾರ(ಜೂ. 26) ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ವೇಳೆ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕುಟುಂಬದವರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಮಗನ ಸಾವಿನಲ್ಲಿ ದಿನದೂಡುತ್ತಿರುವ ರೇಣಕುಸ್ವಾಮಿ ಕುಟುಬಂಕ್ಕೆ ಧ್ರುವಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…