ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಸೇರಿದೆ. ಈ ಹೈ ಪ್ರೊಫೈಲ್ ಕೇಸ್ನ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.
ಕನ್ನಡ ಚಿತ್ರರಂಗವು ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದೆ. ಸದ್ಯ ಈ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವಾಗಲೇ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್ವುಡ್ ಆಕ್ಷನ್ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.
ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡ ಬುಧವಾರ(ಜೂ. 26) ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ವೇಳೆ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕುಟುಂಬದವರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಮಗನ ಸಾವಿನಲ್ಲಿ ದಿನದೂಡುತ್ತಿರುವ ರೇಣಕುಸ್ವಾಮಿ ಕುಟುಬಂಕ್ಕೆ ಧ್ರುವಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…