ರಾಜ್ಯ

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ನಟಿ ರಮ್ಯಾ ಸಲಹೆ ನೀಡಿದ್ದಾರೆ.

ಮಾರ್ಚ್ 19ರಂದು ಬಿಡುಗಡೆಯಾದ ಈ ಚಿತ್ರವು ಮೊದಲ ದಿನವೇ ಶತಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗುತ್ತಿದ್ದರೂ, ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ “ಭಾರಿ ನಿರಾಶೆ” ಎಂದು ಕರೆದಿದ್ದಾರೆ.

ಚಿತ್ರವು ಎಂದಿಗೂ ಮುಗಿಯದ ಅಧ್ಯಾಯನಗಳನ್ನು ಹೊಂದಿರುವ ಅತ್ಯಂತ ನೀರಸ ವಿಷಯದ ಪಠ್ಯಪುಸ್ತಕ ಓದುವಂತಿದೆ. ಧುರಂಧರ್‌ ಭಾಗ ಒಂದರಲ್ಲಿ ಜನರು ಕೂಗೂತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು, ಕಂಪಿಸುವ ಶಕ್ತಿ ಇತ್ತು, ತೊಡಗಿಸಿಕೊಳ್ಳುವಿಕೆ ಇತ್ತು. ಆದರೆ ಇಲ್ಲಿ ಅದಿಲ್ಲ. ಚಿತ್ರಮಂದಿರದಲ್ಲಿ ಸಾಮೂಹಿಕ ನಿರಾಶೆಯನ್ನು ನೀವು ಅನುಭವಿಸಬಹುದು ಎಂದು ಪೋಸ್ಟ್‌ ಮಾಡಿದ್ದಾರೆ.

ಆದಿತ್ಯ ಧರ್‌ ಆಕ್ಷನ್‌ ಕಟ್‌, ರಣವೀರ್‌ ಸಿಂಗ್‌ ನಟನೆಯ ʻದುರಂಧರ್‌ 2’ ಸಿನಿಮಾ ವಿಶ್ವದಾದ್ಯಂತ ಸೌಂಡ್‌ ಮಾಡುತ್ತಿದೆ. ಮೊದಲನೇ ದಿನವೇ ವಿಶ್ವಾದ್ಯಂತ ಸಿನಿಮಾ 240 ಕೋಟಿ ರೂಪಾಯಿ ಗಳಿಸಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ ಮೊದಲ ದಿನದ ಪೇಯ್ಡ್‌ ಪ್ರಿವ್ಯೂಗಳಲ್ಲೇ ಸುಮಾರು 50 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಬೇರೆ ಭಾಷೆಗಳಿಗೆ ಡಬ್‌ ಆಗಿದ್ದರೂ ಕೂಡ, ʻದುರಂಧರ್‌ 2’ ಸಿನಿಮಾವನ್ನ ಹೆಚ್ಚಿನ ಪ್ರೇಕ್ಷಕರು ಮೂಲ ಹಿಂದಿ ಆವೃತ್ತಿಯಲ್ಲೇ ನೋಡಲು ಒಲವು ತೋರುತ್ತಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

10 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

11 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

11 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

11 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

12 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

12 hours ago