ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ನಟಿ ರಮ್ಯಾ ಸಲಹೆ ನೀಡಿದ್ದಾರೆ.
ಮಾರ್ಚ್ 19ರಂದು ಬಿಡುಗಡೆಯಾದ ಈ ಚಿತ್ರವು ಮೊದಲ ದಿನವೇ ಶತಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ನಲ್ಲಿ ಯಶಸ್ವಿಯಾಗುತ್ತಿದ್ದರೂ, ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ “ಭಾರಿ ನಿರಾಶೆ” ಎಂದು ಕರೆದಿದ್ದಾರೆ.
ಚಿತ್ರವು ಎಂದಿಗೂ ಮುಗಿಯದ ಅಧ್ಯಾಯನಗಳನ್ನು ಹೊಂದಿರುವ ಅತ್ಯಂತ ನೀರಸ ವಿಷಯದ ಪಠ್ಯಪುಸ್ತಕ ಓದುವಂತಿದೆ. ಧುರಂಧರ್ ಭಾಗ ಒಂದರಲ್ಲಿ ಜನರು ಕೂಗೂತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು, ಕಂಪಿಸುವ ಶಕ್ತಿ ಇತ್ತು, ತೊಡಗಿಸಿಕೊಳ್ಳುವಿಕೆ ಇತ್ತು. ಆದರೆ ಇಲ್ಲಿ ಅದಿಲ್ಲ. ಚಿತ್ರಮಂದಿರದಲ್ಲಿ ಸಾಮೂಹಿಕ ನಿರಾಶೆಯನ್ನು ನೀವು ಅನುಭವಿಸಬಹುದು ಎಂದು ಪೋಸ್ಟ್ ಮಾಡಿದ್ದಾರೆ.
ಆದಿತ್ಯ ಧರ್ ಆಕ್ಷನ್ ಕಟ್, ರಣವೀರ್ ಸಿಂಗ್ ನಟನೆಯ ʻದುರಂಧರ್ 2’ ಸಿನಿಮಾ ವಿಶ್ವದಾದ್ಯಂತ ಸೌಂಡ್ ಮಾಡುತ್ತಿದೆ. ಮೊದಲನೇ ದಿನವೇ ವಿಶ್ವಾದ್ಯಂತ ಸಿನಿಮಾ 240 ಕೋಟಿ ರೂಪಾಯಿ ಗಳಿಸಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ ಮೊದಲ ದಿನದ ಪೇಯ್ಡ್ ಪ್ರಿವ್ಯೂಗಳಲ್ಲೇ ಸುಮಾರು 50 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಬೇರೆ ಭಾಷೆಗಳಿಗೆ ಡಬ್ ಆಗಿದ್ದರೂ ಕೂಡ, ʻದುರಂಧರ್ 2’ ಸಿನಿಮಾವನ್ನ ಹೆಚ್ಚಿನ ಪ್ರೇಕ್ಷಕರು ಮೂಲ ಹಿಂದಿ ಆವೃತ್ತಿಯಲ್ಲೇ ನೋಡಲು ಒಲವು ತೋರುತ್ತಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…