ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ನಟಿ ರಮ್ಯಾ ಸಲಹೆ ನೀಡಿದ್ದಾರೆ.
ಮಾರ್ಚ್ 19ರಂದು ಬಿಡುಗಡೆಯಾದ ಈ ಚಿತ್ರವು ಮೊದಲ ದಿನವೇ ಶತಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ನಲ್ಲಿ ಯಶಸ್ವಿಯಾಗುತ್ತಿದ್ದರೂ, ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ “ಭಾರಿ ನಿರಾಶೆ” ಎಂದು ಕರೆದಿದ್ದಾರೆ.
ಚಿತ್ರವು ಎಂದಿಗೂ ಮುಗಿಯದ ಅಧ್ಯಾಯನಗಳನ್ನು ಹೊಂದಿರುವ ಅತ್ಯಂತ ನೀರಸ ವಿಷಯದ ಪಠ್ಯಪುಸ್ತಕ ಓದುವಂತಿದೆ. ಧುರಂಧರ್ ಭಾಗ ಒಂದರಲ್ಲಿ ಜನರು ಕೂಗೂತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು, ಕಂಪಿಸುವ ಶಕ್ತಿ ಇತ್ತು, ತೊಡಗಿಸಿಕೊಳ್ಳುವಿಕೆ ಇತ್ತು. ಆದರೆ ಇಲ್ಲಿ ಅದಿಲ್ಲ. ಚಿತ್ರಮಂದಿರದಲ್ಲಿ ಸಾಮೂಹಿಕ ನಿರಾಶೆಯನ್ನು ನೀವು ಅನುಭವಿಸಬಹುದು ಎಂದು ಪೋಸ್ಟ್ ಮಾಡಿದ್ದಾರೆ.
ಆದಿತ್ಯ ಧರ್ ಆಕ್ಷನ್ ಕಟ್, ರಣವೀರ್ ಸಿಂಗ್ ನಟನೆಯ ʻದುರಂಧರ್ 2’ ಸಿನಿಮಾ ವಿಶ್ವದಾದ್ಯಂತ ಸೌಂಡ್ ಮಾಡುತ್ತಿದೆ. ಮೊದಲನೇ ದಿನವೇ ವಿಶ್ವಾದ್ಯಂತ ಸಿನಿಮಾ 240 ಕೋಟಿ ರೂಪಾಯಿ ಗಳಿಸಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ ಮೊದಲ ದಿನದ ಪೇಯ್ಡ್ ಪ್ರಿವ್ಯೂಗಳಲ್ಲೇ ಸುಮಾರು 50 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಬೇರೆ ಭಾಷೆಗಳಿಗೆ ಡಬ್ ಆಗಿದ್ದರೂ ಕೂಡ, ʻದುರಂಧರ್ 2’ ಸಿನಿಮಾವನ್ನ ಹೆಚ್ಚಿನ ಪ್ರೇಕ್ಷಕರು ಮೂಲ ಹಿಂದಿ ಆವೃತ್ತಿಯಲ್ಲೇ ನೋಡಲು ಒಲವು ತೋರುತ್ತಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…