ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕಳೆದ ಎರಡು ಮೂರು ವರ್ಷಗಳಿಂದ ಅರ್ಧ ಸಂಬಳ ಪಡೆದು ಬೇಸತ್ತಿದ್ದ ಡಯಾಲಿಸಿಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳವೂ ಸಹ ಬರದಿರುವ ಕಾರಣ ಈ ನಿರ್ಧಾರವನ್ನು ಸಿಬ್ಬಂದಿಗಳು ಕೈಗೊಂಡಿದ್ದಾರೆ. ನವೆಂಬರ್ 30ರಿಂದ ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಇನ್ನು ರಾಜ್ಯಾದ್ಯಂತ ಒಟ್ಟು 202 ಡಯಾಲಿಸಿಸ್ ಕೇಂದ್ರಗಳಿದ್ದು, ಒಟ್ಟು 650 ಕೆಲಸ ಮಾಡುತ್ತಿದ್ದಾರೆ. 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ಮಾಡುತ್ತಿದ್ದ ಕೊಲ್ಕತ್ತಾದ ಸಂಸ್ಥೆ ಬಿಆರ್ಎಸ್ ಹಿಂದೆ ಸರಿದಿತ್ತು. ಅಂದಿನಿಂದ 45 ಕೇಂದ್ರಗಳನ್ನು ನಿರ್ವಹಿಸುತ್ತಿದ್ದ ಇಎಸ್ಕೆಎಜಿ ಸಂಸ್ಥೆ ಹೆಗಲಿಗೆ ರಾಜ್ಯದ ಎಲ್ಲಾ ಡಯಾಲಿಸಿಸ್ ಕೇಂದ್ರಗಳ ಜವಾಬ್ದಾರಿ ಬಿದ್ದಿದೆ. ಈ ಸಂಸ್ಥೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾರಿಗೂ ಕಳೆದ ಎರಡು ತಿಂಗಳುಗಳಿಂದ ಸಂಬಳ, ಪಿಎಫ್ ಹಾಗೂ ಇಎಸ್ಐ ಸಹ ಸಿಗದ ಕಾರಣ ಜೀವನ ನಡೆಸಲು ಕಷ್ಟವಾಗುತ್ತಿದೆ, ಇದರ ಕುರಿತು ಗಮನ ಹರಿಸಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮೂರು ಬಾರಿ ಭೇಟಿ ಮಾಡಿದರೂ ಸಹ ಯಾವುದೇ ಬೆಳವಣಿಗೆಯಾಗದ ಕಾರಣ ಬಂದ್ ಮಾಡುವ ನಿರ್ಣಯವನ್ನು ಡಯಾಲಿಸಿಸ್ ಸಿಬ್ಬಂದಿ ತೆಗೆದುಕೊಂಡಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…