ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕಳೆದ ಎರಡು ಮೂರು ವರ್ಷಗಳಿಂದ ಅರ್ಧ ಸಂಬಳ ಪಡೆದು ಬೇಸತ್ತಿದ್ದ ಡಯಾಲಿಸಿಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳವೂ ಸಹ ಬರದಿರುವ ಕಾರಣ ಈ ನಿರ್ಧಾರವನ್ನು ಸಿಬ್ಬಂದಿಗಳು ಕೈಗೊಂಡಿದ್ದಾರೆ. ನವೆಂಬರ್ 30ರಿಂದ ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಇನ್ನು ರಾಜ್ಯಾದ್ಯಂತ ಒಟ್ಟು 202 ಡಯಾಲಿಸಿಸ್ ಕೇಂದ್ರಗಳಿದ್ದು, ಒಟ್ಟು 650 ಕೆಲಸ ಮಾಡುತ್ತಿದ್ದಾರೆ. 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ಮಾಡುತ್ತಿದ್ದ ಕೊಲ್ಕತ್ತಾದ ಸಂಸ್ಥೆ ಬಿಆರ್ಎಸ್ ಹಿಂದೆ ಸರಿದಿತ್ತು. ಅಂದಿನಿಂದ 45 ಕೇಂದ್ರಗಳನ್ನು ನಿರ್ವಹಿಸುತ್ತಿದ್ದ ಇಎಸ್ಕೆಎಜಿ ಸಂಸ್ಥೆ ಹೆಗಲಿಗೆ ರಾಜ್ಯದ ಎಲ್ಲಾ ಡಯಾಲಿಸಿಸ್ ಕೇಂದ್ರಗಳ ಜವಾಬ್ದಾರಿ ಬಿದ್ದಿದೆ. ಈ ಸಂಸ್ಥೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾರಿಗೂ ಕಳೆದ ಎರಡು ತಿಂಗಳುಗಳಿಂದ ಸಂಬಳ, ಪಿಎಫ್ ಹಾಗೂ ಇಎಸ್ಐ ಸಹ ಸಿಗದ ಕಾರಣ ಜೀವನ ನಡೆಸಲು ಕಷ್ಟವಾಗುತ್ತಿದೆ, ಇದರ ಕುರಿತು ಗಮನ ಹರಿಸಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮೂರು ಬಾರಿ ಭೇಟಿ ಮಾಡಿದರೂ ಸಹ ಯಾವುದೇ ಬೆಳವಣಿಗೆಯಾಗದ ಕಾರಣ ಬಂದ್ ಮಾಡುವ ನಿರ್ಣಯವನ್ನು ಡಯಾಲಿಸಿಸ್ ಸಿಬ್ಬಂದಿ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…