ರಾಜ್ಯ

ಸಂಬಳ ನೀಡದ ರಾಜ್ಯ ಸರ್ಕಾರ; ನವೆಂಬರ್‌ 30ರಿಂದ ಡಯಾಲಿಸಿಸ್‌ ಕೇಂದ್ರಗಳು ಬಂದ್!

ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್‌ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್‌ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕಳೆದ ಎರಡು ಮೂರು ವರ್ಷಗಳಿಂದ ಅರ್ಧ ಸಂಬಳ ಪಡೆದು ಬೇಸತ್ತಿದ್ದ ಡಯಾಲಿಸಿಸ್‌ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳವೂ ಸಹ ಬರದಿರುವ ಕಾರಣ ಈ ನಿರ್ಧಾರವನ್ನು ಸಿಬ್ಬಂದಿಗಳು ಕೈಗೊಂಡಿದ್ದಾರೆ. ನವೆಂಬರ್‌ 30ರಿಂದ ರಾಜ್ಯದಲ್ಲಿರುವ ಡಯಾಲಿಸಿಸ್‌ ಕೇಂದ್ರಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಇನ್ನು ರಾಜ್ಯಾದ್ಯಂತ ಒಟ್ಟು 202 ಡಯಾಲಿಸಿಸ್‌ ಕೇಂದ್ರಗಳಿದ್ದು, ಒಟ್ಟು 650 ಕೆಲಸ ಮಾಡುತ್ತಿದ್ದಾರೆ. 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ಡಯಾಲಿಸಿಸ್‌ ಕೇಂದ್ರಗಳ ನಿರ್ವಹಣೆ ಮಾಡುತ್ತಿದ್ದ ಕೊಲ್ಕತ್ತಾದ ಸಂಸ್ಥೆ ಬಿಆರ್‌ಎಸ್‌ ಹಿಂದೆ ಸರಿದಿತ್ತು. ಅಂದಿನಿಂದ 45 ಕೇಂದ್ರಗಳನ್ನು ನಿರ್ವಹಿಸುತ್ತಿದ್ದ ಇಎಸ್‌ಕೆಎಜಿ ಸಂಸ್ಥೆ ಹೆಗಲಿಗೆ ರಾಜ್ಯದ ಎಲ್ಲಾ ಡಯಾಲಿಸಿಸ್‌ ಕೇಂದ್ರಗಳ ಜವಾಬ್ದಾರಿ ಬಿದ್ದಿದೆ. ಈ ಸಂಸ್ಥೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾರಿಗೂ ಕಳೆದ ಎರಡು ತಿಂಗಳುಗಳಿಂದ ಸಂಬಳ, ಪಿಎಫ್‌ ಹಾಗೂ ಇಎಸ್‌ಐ ಸಹ ಸಿಗದ ಕಾರಣ ಜೀವನ ನಡೆಸಲು ಕಷ್ಟವಾಗುತ್ತಿದೆ, ಇದರ ಕುರಿತು ಗಮನ ಹರಿಸಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಮೂರು ಬಾರಿ ಭೇಟಿ ಮಾಡಿದರೂ ಸಹ ಯಾವುದೇ ಬೆಳವಣಿಗೆಯಾಗದ ಕಾರಣ ಬಂದ್‌ ಮಾಡುವ ನಿರ್ಣಯವನ್ನು ಡಯಾಲಿಸಿಸ್‌ ಸಿಬ್ಬಂದಿ ತೆಗೆದುಕೊಂಡಿದ್ದಾರೆ.

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago