ರಾಜ್ಯ

ಸಂಬಳ ನೀಡದ ರಾಜ್ಯ ಸರ್ಕಾರ; ನವೆಂಬರ್‌ 30ರಿಂದ ಡಯಾಲಿಸಿಸ್‌ ಕೇಂದ್ರಗಳು ಬಂದ್!

ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್‌ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್‌ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕಳೆದ ಎರಡು ಮೂರು ವರ್ಷಗಳಿಂದ ಅರ್ಧ ಸಂಬಳ ಪಡೆದು ಬೇಸತ್ತಿದ್ದ ಡಯಾಲಿಸಿಸ್‌ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳವೂ ಸಹ ಬರದಿರುವ ಕಾರಣ ಈ ನಿರ್ಧಾರವನ್ನು ಸಿಬ್ಬಂದಿಗಳು ಕೈಗೊಂಡಿದ್ದಾರೆ. ನವೆಂಬರ್‌ 30ರಿಂದ ರಾಜ್ಯದಲ್ಲಿರುವ ಡಯಾಲಿಸಿಸ್‌ ಕೇಂದ್ರಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಇನ್ನು ರಾಜ್ಯಾದ್ಯಂತ ಒಟ್ಟು 202 ಡಯಾಲಿಸಿಸ್‌ ಕೇಂದ್ರಗಳಿದ್ದು, ಒಟ್ಟು 650 ಕೆಲಸ ಮಾಡುತ್ತಿದ್ದಾರೆ. 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ಡಯಾಲಿಸಿಸ್‌ ಕೇಂದ್ರಗಳ ನಿರ್ವಹಣೆ ಮಾಡುತ್ತಿದ್ದ ಕೊಲ್ಕತ್ತಾದ ಸಂಸ್ಥೆ ಬಿಆರ್‌ಎಸ್‌ ಹಿಂದೆ ಸರಿದಿತ್ತು. ಅಂದಿನಿಂದ 45 ಕೇಂದ್ರಗಳನ್ನು ನಿರ್ವಹಿಸುತ್ತಿದ್ದ ಇಎಸ್‌ಕೆಎಜಿ ಸಂಸ್ಥೆ ಹೆಗಲಿಗೆ ರಾಜ್ಯದ ಎಲ್ಲಾ ಡಯಾಲಿಸಿಸ್‌ ಕೇಂದ್ರಗಳ ಜವಾಬ್ದಾರಿ ಬಿದ್ದಿದೆ. ಈ ಸಂಸ್ಥೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾರಿಗೂ ಕಳೆದ ಎರಡು ತಿಂಗಳುಗಳಿಂದ ಸಂಬಳ, ಪಿಎಫ್‌ ಹಾಗೂ ಇಎಸ್‌ಐ ಸಹ ಸಿಗದ ಕಾರಣ ಜೀವನ ನಡೆಸಲು ಕಷ್ಟವಾಗುತ್ತಿದೆ, ಇದರ ಕುರಿತು ಗಮನ ಹರಿಸಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಮೂರು ಬಾರಿ ಭೇಟಿ ಮಾಡಿದರೂ ಸಹ ಯಾವುದೇ ಬೆಳವಣಿಗೆಯಾಗದ ಕಾರಣ ಬಂದ್‌ ಮಾಡುವ ನಿರ್ಣಯವನ್ನು ಡಯಾಲಿಸಿಸ್‌ ಸಿಬ್ಬಂದಿ ತೆಗೆದುಕೊಂಡಿದ್ದಾರೆ.

andolana

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

1 hour ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago