ರಾಜ್ಯ

ಚನ್ನಪಟ್ಟಣದಲ್ಲಿ ನಟ ದರ್ಶನ್‌ ಕಣಕ್ಕಿಳಿಸಲು ಪ್ಲಾನ್‌ ಮಾಡಿದ್ರಾ ಡಿಕೆ ಸಹೋದರರು? ಸಿಪಿವೈ ಸ್ಫೋಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಡಿ.ಕೆ ಸಹೋದರರು ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿ.ಪಿ ಯೋಗೇಶ್ವರ್‌ ಅವರ ಈ ಹೇಳಿಕೆಯಿಂದ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಕಾಂಗ್ರೆಸ್‌ನಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ರಾ? ಈ ಬಗ್ಗೆ ಡಿಕೆ ಸಹೋದರರು ಪ್ಲಾನ್‌ ಮಾಡಿದ್ರಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.

ಉಪ ಚುನಾವಣೆ ಕುರಿತು ಶುಕ್ರವಾರ(ಜೂ.14) ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಟ ದರ್ಶನ್‌ ಹೆಸರನ್ನು ಪ್ರಸ್ತಾಪಿಸದೆ ಸಿ.ಪಿ ಯೋಗೇಶ್ವರ್‌ ಪ್ರತಿಕ್ರಿಯಿಸಿದರು. ಚನ್ನಪಟ್ಟಣಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಡಿ.ಕೆ ಸುರೇಶ್‌ ಅವರೇ ಹೆಳಿದ್ರು. ಕಾಂಗ್ರೆಸ್‌ ಪರವಾಗಿ ಚಿತ್ರನಟರೊಬ್ಬರು ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ನನಗೆ ಬಂದ ಮಾಹಿತಿ ಪ್ರಕಾರ, ಅವರನ್ನೇ ಕರೆದುಕೊಂಡು ಬಂದು ನಿಲ್ಲಿಸರು ಸಹೋದರರು ಸಿದ್ಧತೆ ನಡೆಸಿದ್ದರು. ಈಗ ಬೇರೆಯವರನ್ನು ಕರೆ ತರುತ್ತಾರಾ ನೋಡಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಮೇಲಿನ ಕೊಲೆ ಆರೋಪದ ಬಗ್ಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನೋಡಿ ಈ ಬಗ್ಗೆ ತಿಳಿದುಕೊಂಡೆ, ಇದೊಂದು ವಿಚಿತ್ರ ಕೇಸ್‌ ಅನ್ನಿಸುತ್ತೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ ಆದರೆ ಈ ರೀತಿ ಅನಾಹುತ ಮಾಡಿಕೊಂಡು ಜೈಲಿ ಸೇರಿದ್ದಾರೆ. ನೋಡೊಣ ಬೇರೆಯವರನ್ನ ಕರೆ ತರುತ್ತಾರಾ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

5 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago