Astronaut Shubhas Shukla to return to India by August 17
ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳಿದ ನಂತರ ಅವರಿಗೆ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಲಾಯಿತು.
ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯ ರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು. ಈ ವೇಳೆ ಯಾವುದೇ ತೊಂದರೆಗಳು ಕಾಣಿಸಿಕೊಂಡಿಲ್ಲ. ಎಲ್ಲಾ ಗಗನಯಾತ್ರಿಗಳನ್ನು ಒಂದು ವಾರದ ಪುನಶ್ಚೇತನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.
ಹೀಗಾಗಿ ಎಲ್ಲಾ ಯಾತ್ರಿಕರಿಗೆ ಒಂದು ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನಂತರದಲ್ಲಿ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜೊತೆ ಬೆರೆಯಲಿದ್ದಾರೆ ಎಂದು ಇಸ್ರೋ ಮಾಹಿತಿ ನೀಡಿದೆ.
ಇನ್ನು 20 ದಿನಗಳ ಬಾಹ್ಯಾಕಾಶ ಪ್ರಯಾಣದಲ್ಲಿ ಶುಭಾಂಶು ಶುಕ್ಲಾ ಅವರ ತಂಡ 18 ದಿನಗಳ ಕಾಲ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದರು. ಅಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯೋಗಗಳನ್ನು ನಡೆಸಿದರು.
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…