Astronaut Shubhas Shukla to return to India by August 17
ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳಿದ ನಂತರ ಅವರಿಗೆ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಲಾಯಿತು.
ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯ ರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು. ಈ ವೇಳೆ ಯಾವುದೇ ತೊಂದರೆಗಳು ಕಾಣಿಸಿಕೊಂಡಿಲ್ಲ. ಎಲ್ಲಾ ಗಗನಯಾತ್ರಿಗಳನ್ನು ಒಂದು ವಾರದ ಪುನಶ್ಚೇತನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.
ಹೀಗಾಗಿ ಎಲ್ಲಾ ಯಾತ್ರಿಕರಿಗೆ ಒಂದು ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನಂತರದಲ್ಲಿ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜೊತೆ ಬೆರೆಯಲಿದ್ದಾರೆ ಎಂದು ಇಸ್ರೋ ಮಾಹಿತಿ ನೀಡಿದೆ.
ಇನ್ನು 20 ದಿನಗಳ ಬಾಹ್ಯಾಕಾಶ ಪ್ರಯಾಣದಲ್ಲಿ ಶುಭಾಂಶು ಶುಕ್ಲಾ ಅವರ ತಂಡ 18 ದಿನಗಳ ಕಾಲ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದರು. ಅಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯೋಗಗಳನ್ನು ನಡೆಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…