ರಾಜ್ಯ

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಆರೋಗ್ಯ ಸ್ಥಿರ: ಒಂದು ವಾರ ಪುನಶ್ಚೇತನಕ್ಕೆ

ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳಿದ ನಂತರ ಅವರಿಗೆ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಲಾಯಿತು.

ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯ ರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು. ಈ ವೇಳೆ ಯಾವುದೇ ತೊಂದರೆಗಳು ಕಾಣಿಸಿಕೊಂಡಿಲ್ಲ. ಎಲ್ಲಾ ಗಗನಯಾತ್ರಿಗಳನ್ನು ಒಂದು ವಾರದ ಪುನಶ್ಚೇತನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.

ಹೀಗಾಗಿ ಎಲ್ಲಾ ಯಾತ್ರಿಕರಿಗೆ ಒಂದು ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನಂತರದಲ್ಲಿ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜೊತೆ ಬೆರೆಯಲಿದ್ದಾರೆ ಎಂದು ಇಸ್ರೋ ಮಾಹಿತಿ ನೀಡಿದೆ.

ಇನ್ನು 20 ದಿನಗಳ ಬಾಹ್ಯಾಕಾಶ ಪ್ರಯಾಣದಲ್ಲಿ ಶುಭಾಂಶು ಶುಕ್ಲಾ ಅವರ ತಂಡ 18 ದಿನಗಳ ಕಾಲ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದರು. ಅಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯೋಗಗಳನ್ನು ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

14 hours ago