ರಾಜ್ಯ

ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ: ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸ್‌ರ್‌ಗಳಿಗೂ ಸರ್ಕಾರಿ ಜಾಹೀರಾತು..

ಮೈಸೂರು: ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.

ಈ ಸಂಬಂಧ ʼಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್‌ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಇದು ಅನುವು ಮಾಡಿಕೊಡಲಿದೆ.

ಬ್ರ್ಯಾಂಡ್ ರಾಯಭಾರಿಗಳು, ಪ್ರಾಯೋಜಿತ ಪೋಸ್ಟ್‌ಗಳು, ಅತಿಥಿ ಬ್ಲಾಗ್‌ಗಳು, ಕಂಟೆಂಟ್‌ ಸಹಯೋಗ, ವಿಷಯಾಧಾರಿತ ಅಭಿಯಾನ, ಕಾರ್ಯಕ್ರಮ ಪ್ರಚಾರ, ವಿಮರ್ಶೆ ಮತ್ತು ಹ್ಯಾಶ್‌ಟ್ಯಾಗ್‌ ಅಭಿಯಾನಗಳ ಸ್ವರೂಪದಲ್ಲಿ ಇನ್‌ಫ್ಲುಯೆನ್ಸರ್‌ಗಳಿಗೆ ಜಾಹೀರಾತು ನೀಡಲಾಗುತ್ತದೆ.

ಯಾವುದಾದರೂ ಒಂದು ಸಾಮಾಜಿಕ ಜಾಲತಾಣಗಳಲ್ಲಿ ನಿಗದಿತ ಸಂಖ್ಯೆಯ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲುಯೆನ್ಸರ್‌ಗಳಿಗೆ ಸರ್ಕಾರಿ ಜಾಹೀರಾತು ದೊರೆಯಲಿದೆ. ಇನ್‌ಫ್ಲುಯೆನ್ಸರ್‌ಗಳಲ್ಲಿ ಮೂರು ವರ್ಗೀಕರಣ ಮಾಡಲಾಗಿದೆ. ಫಾಲೋವರ್‌ಗಳ ಸಂಖ್ಯೆ 1 ಲಕ್ಷದಿಂದ 5 ಲಕ್ಷದವರೆಗೆ ಇದ್ದರೆ ‘ನ್ಯಾನೊ’, 5 ಲಕ್ಷದಿಂದ 10 ಲಕ್ಷದವರೆಗೆ ‘ಮೈಕ್ರೊ’ ಮತ್ತು 10 ಲಕ್ಷಕ್ಕಿಂತ ಹೆಚ್ಚು ಇದ್ದರೆ ‘ಮ್ಯಾಕ್ರೊ’ ಇನ್‌ಫ್ಲುಯೆನ್ಸರ್‌ಗಳು ಎಂದು ವರ್ಗೀಕರಿಸಲಾಗಿದೆ.

ವಾರ್ತಾ ಇಲಾಖೆಯು ನೋಂದಾಯಿತ ಏಜೆನ್ಸಿಗಳ ಮೂಲಕ ಜಾಹೀರಾತು ನೀಡಲಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಜಾಹೀರಾತು ನೀತಿಯ ಅಡಿಯಲ್ಲಿ ನಿಗದಿಪಡಿಸಲಾದ ಅಥವಾ ಇಲಾಖೆಯೇ ಸ್ವತಂತ್ರವಾಗಿ ನಿಗದಿಪಡಿಸಿದ ದರದಲ್ಲಿ ಜಾಹೀರಾತು ನೀಡಲಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

1 hour ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

5 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

5 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

5 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

5 hours ago