ರಾಜ್ಯ

ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ: ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸ್‌ರ್‌ಗಳಿಗೂ ಸರ್ಕಾರಿ ಜಾಹೀರಾತು..

ಮೈಸೂರು: ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.

ಈ ಸಂಬಂಧ ʼಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್‌ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಇದು ಅನುವು ಮಾಡಿಕೊಡಲಿದೆ.

ಬ್ರ್ಯಾಂಡ್ ರಾಯಭಾರಿಗಳು, ಪ್ರಾಯೋಜಿತ ಪೋಸ್ಟ್‌ಗಳು, ಅತಿಥಿ ಬ್ಲಾಗ್‌ಗಳು, ಕಂಟೆಂಟ್‌ ಸಹಯೋಗ, ವಿಷಯಾಧಾರಿತ ಅಭಿಯಾನ, ಕಾರ್ಯಕ್ರಮ ಪ್ರಚಾರ, ವಿಮರ್ಶೆ ಮತ್ತು ಹ್ಯಾಶ್‌ಟ್ಯಾಗ್‌ ಅಭಿಯಾನಗಳ ಸ್ವರೂಪದಲ್ಲಿ ಇನ್‌ಫ್ಲುಯೆನ್ಸರ್‌ಗಳಿಗೆ ಜಾಹೀರಾತು ನೀಡಲಾಗುತ್ತದೆ.

ಯಾವುದಾದರೂ ಒಂದು ಸಾಮಾಜಿಕ ಜಾಲತಾಣಗಳಲ್ಲಿ ನಿಗದಿತ ಸಂಖ್ಯೆಯ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲುಯೆನ್ಸರ್‌ಗಳಿಗೆ ಸರ್ಕಾರಿ ಜಾಹೀರಾತು ದೊರೆಯಲಿದೆ. ಇನ್‌ಫ್ಲುಯೆನ್ಸರ್‌ಗಳಲ್ಲಿ ಮೂರು ವರ್ಗೀಕರಣ ಮಾಡಲಾಗಿದೆ. ಫಾಲೋವರ್‌ಗಳ ಸಂಖ್ಯೆ 1 ಲಕ್ಷದಿಂದ 5 ಲಕ್ಷದವರೆಗೆ ಇದ್ದರೆ ‘ನ್ಯಾನೊ’, 5 ಲಕ್ಷದಿಂದ 10 ಲಕ್ಷದವರೆಗೆ ‘ಮೈಕ್ರೊ’ ಮತ್ತು 10 ಲಕ್ಷಕ್ಕಿಂತ ಹೆಚ್ಚು ಇದ್ದರೆ ‘ಮ್ಯಾಕ್ರೊ’ ಇನ್‌ಫ್ಲುಯೆನ್ಸರ್‌ಗಳು ಎಂದು ವರ್ಗೀಕರಿಸಲಾಗಿದೆ.

ವಾರ್ತಾ ಇಲಾಖೆಯು ನೋಂದಾಯಿತ ಏಜೆನ್ಸಿಗಳ ಮೂಲಕ ಜಾಹೀರಾತು ನೀಡಲಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಜಾಹೀರಾತು ನೀತಿಯ ಅಡಿಯಲ್ಲಿ ನಿಗದಿಪಡಿಸಲಾದ ಅಥವಾ ಇಲಾಖೆಯೇ ಸ್ವತಂತ್ರವಾಗಿ ನಿಗದಿಪಡಿಸಿದ ದರದಲ್ಲಿ ಜಾಹೀರಾತು ನೀಡಲಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

6 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

6 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

7 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

7 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

8 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

8 hours ago