ರಾಜ್ಯ

ಡಿಜಿಟಲ್‌ ಮಾಧ್ಯಮಗಳು ಮಾತ್ರ ಹೆಚ್ಚು ಸತ್ಯ ಹೇಳುತ್ತಿವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್‌ ನ್ಯೂಸ್‌ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್‌ ಮಾಧ್ಯಮಗಳು ಹೆಚ್ಚಾಗಿ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈದಿನ ಕಾಮ್‌ನ ʼವಿಶೇಷ ಸಂಚಿಕೆʼ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್‌ ಅವರು ಸಂವಿಧಾನ ಜಾರಿ ವೇಳೆ ನಾವು ವೈವಿಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದಲ್ಲಿ ರಾಜಕೀಯವಾಗಿ ನಮಗೆ ಸಮಾನತೆ ಸಿಕ್ಕಿದೆ ಆದರೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಅಸಮಾನತೆ ಇದೆʼ ಈ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಮೂಲ ಕಾರಣ. ಅನೇಕ ಶತಮಾನಗಳ ಕಾಲ ಶೂದ್ರರು, ಹಿಂದುಳಿದವರು, ದಲಿತರು ಎಲ್ಲರನ್ನೂ ಜಾತಿಯಿಂದ ಅಳೆಯಲಾಗುತ್ತಿತ್ತೆ ಹೊರತು ವ್ಯಕ್ತಿತ್ವದ ಮೇಲಲ್ಲ. ಹೆಣ್ಣು ಮಕ್ಕಳಿಗೆ ಸಮಾನತೆ ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ ಎಂದು ಹೇಳಿದರು.

ಅಂಬೇಡ್ಕರ್‌ ಯಾರಿಗೆ ಇತಿಹಾಸ ಗೊತ್ತಿಲ್ಲವೋ ಅವರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ನಮಗೆ ರಾಜಕೀಯ ಪ್ರಜಾಪ್ರಭುತ್ವ ಸಿಕ್ಕಿದೆ. ಆದರೆ ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಸಿಗುವವರೆಗೂ ಪ್ರಜಾಪ್ರಭುತ್ವ ಯಶಸ್ಸು ಕಾಣಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡುವ ಆವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಗುರಿ ಸಂವಿಧಾನ ಆಶಯಗಳನ್ನು ಜಾರಿ ಮಾಡುವುದು.ಆದರೆ ಸಂವಿಧಾನ ವಿರೋಧ ಮಾಡುವವರೇ ಇದ್ದಾರೆ. ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಮಾಧ್ಯಮಗಳು ಅತಂತ್ರ ಸರ್ಕಾರ ರಚನೆಯಾಗುತ್ತದೆ ಎಂದು ಹೇಳುತ್ತಿದ್ದರು. ಆದರೆ ಈದಿನ ಕಾಮ್‌ ಮಾತ್ರ ಕಾಂಗ್ರೆಸ್‌ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಿಖರವಾಗಿ ಸಮೀಕ್ಷೆ ನಡೆಸಿ ಹೇಳಿತ್ತು. ಇದು ಇನ್ನು ವಿಸ್ತಾರವಾಗಿ ಬೆಳೆಯಲಿ ಎಂದು ಆಶಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago