ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್ ನ್ಯೂಸ್ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮಗಳು ಹೆಚ್ಚಾಗಿ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈದಿನ ಕಾಮ್ನ ʼವಿಶೇಷ ಸಂಚಿಕೆʼ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಜಾರಿ ವೇಳೆ ನಾವು ವೈವಿಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದಲ್ಲಿ ರಾಜಕೀಯವಾಗಿ ನಮಗೆ ಸಮಾನತೆ ಸಿಕ್ಕಿದೆ ಆದರೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಅಸಮಾನತೆ ಇದೆʼ ಈ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಮೂಲ ಕಾರಣ. ಅನೇಕ ಶತಮಾನಗಳ ಕಾಲ ಶೂದ್ರರು, ಹಿಂದುಳಿದವರು, ದಲಿತರು ಎಲ್ಲರನ್ನೂ ಜಾತಿಯಿಂದ ಅಳೆಯಲಾಗುತ್ತಿತ್ತೆ ಹೊರತು ವ್ಯಕ್ತಿತ್ವದ ಮೇಲಲ್ಲ. ಹೆಣ್ಣು ಮಕ್ಕಳಿಗೆ ಸಮಾನತೆ ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ ಎಂದು ಹೇಳಿದರು.
ಅಂಬೇಡ್ಕರ್ ಯಾರಿಗೆ ಇತಿಹಾಸ ಗೊತ್ತಿಲ್ಲವೋ ಅವರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ನಮಗೆ ರಾಜಕೀಯ ಪ್ರಜಾಪ್ರಭುತ್ವ ಸಿಕ್ಕಿದೆ. ಆದರೆ ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಸಿಗುವವರೆಗೂ ಪ್ರಜಾಪ್ರಭುತ್ವ ಯಶಸ್ಸು ಕಾಣಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡುವ ಆವಶ್ಯಕತೆ ಇದೆ ಎಂದು ಹೇಳಿದರು.
ನಮ್ಮ ಗುರಿ ಸಂವಿಧಾನ ಆಶಯಗಳನ್ನು ಜಾರಿ ಮಾಡುವುದು.ಆದರೆ ಸಂವಿಧಾನ ವಿರೋಧ ಮಾಡುವವರೇ ಇದ್ದಾರೆ. ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಮಾಧ್ಯಮಗಳು ಅತಂತ್ರ ಸರ್ಕಾರ ರಚನೆಯಾಗುತ್ತದೆ ಎಂದು ಹೇಳುತ್ತಿದ್ದರು. ಆದರೆ ಈದಿನ ಕಾಮ್ ಮಾತ್ರ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಿಖರವಾಗಿ ಸಮೀಕ್ಷೆ ನಡೆಸಿ ಹೇಳಿತ್ತು. ಇದು ಇನ್ನು ವಿಸ್ತಾರವಾಗಿ ಬೆಳೆಯಲಿ ಎಂದು ಆಶಿಸಿದರು.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…