ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್.ವೈ.ಮೇಟಿ ಅವರಿಂದು ನಿಧನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಮೇಟಿ ಅವರ ಅಗಲಿಕೆ ಅತ್ಯಂತ ವಿಷಾದನೀಯವಾಗಿದೆ. ದೇವರ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾ ಸೂಚಿಸಿದರು.
ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೇಟಿ ಅವರು ಅನಾರೋಗ್ಯದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ದುಃಖವಾಯಿತು. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ದೊರೆತಿತ್ತು. ಅವರ ಅಗಲಿಕೆಯೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೂಡ ಸಂತಾಪ ಸೂಚಿಸಿದ್ದು, ಮೇಟಿ ಅವರ ನಿಧನಕ್ಕೆ ಸಂತಾಪ ಕೋರುವೆ. ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜನಪ್ರಿಯವಾಗಿದ್ದ ಅವರ ಅಗಲಿಕೆಯಿಂದ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಉಂಟಾಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…