ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾರೆ.
ಈ ದುರಂತ ಇಂದು(ಮಾರ್ಚ್.9) ಬೇಲೂರು ನಗರದಲ್ಲಿ ನಡೆದಿದ್ದು, ಮೃತರಲ್ಲಿ ಇಬ್ಬರನ್ನು ಆಶಾ ಮತ್ತು ದೀಪು ಎಂದು ಗುರುತಿಸಲಾಗಿದೆ. ಆದರೆ ಇನ್ನುಳಿದ ಇಬ್ಬರು ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕಟ್ಟದ ಬಿದ್ದ ಸ್ಥಳದಲ್ಲಿ ಹಲವರು ಸಿಲುಕಿಕೊಂಡರುವ ಶಂಕೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾಳುಬಿದ್ದ ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ನಾಲ್ವರು ಬೀದಿ ವ್ಯಾಪಾರಿಗಳು ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಈ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…