ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾರೆ.
ಈ ದುರಂತ ಇಂದು(ಮಾರ್ಚ್.9) ಬೇಲೂರು ನಗರದಲ್ಲಿ ನಡೆದಿದ್ದು, ಮೃತರಲ್ಲಿ ಇಬ್ಬರನ್ನು ಆಶಾ ಮತ್ತು ದೀಪು ಎಂದು ಗುರುತಿಸಲಾಗಿದೆ. ಆದರೆ ಇನ್ನುಳಿದ ಇಬ್ಬರು ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕಟ್ಟದ ಬಿದ್ದ ಸ್ಥಳದಲ್ಲಿ ಹಲವರು ಸಿಲುಕಿಕೊಂಡರುವ ಶಂಕೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾಳುಬಿದ್ದ ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ನಾಲ್ವರು ಬೀದಿ ವ್ಯಾಪಾರಿಗಳು ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಈ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…