Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ಮನೆಯಲ್ಲಿ ಹುಲಿ, ಬೀದಿಯಲ್ಲಿ ಇಲಿಯಂತಾದರೆ ಏನು ಪ್ರಯೋಜನ? ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ಹಾಕು ಮಣೆ-ನೂಕು ಮಣೆ-ಯಾಕೆ ಮಣೆ? ಎಂಬಂತೆ ಸತ್ಕಾರ ಮಾಡುತ್ತದೆ‌ ಎಂದು ಹೇಳಿದ್ದಾರೆ.

Tags: