ರಾಜ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ಮನೆಯಲ್ಲಿ ಹುಲಿ, ಬೀದಿಯಲ್ಲಿ ಇಲಿಯಂತಾದರೆ ಏನು ಪ್ರಯೋಜನ? ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ಹಾಕು ಮಣೆ-ನೂಕು ಮಣೆ-ಯಾಕೆ ಮಣೆ? ಎಂಬಂತೆ ಸತ್ಕಾರ ಮಾಡುತ್ತದೆ‌ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago