ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ಮನೆಯಲ್ಲಿ ಹುಲಿ, ಬೀದಿಯಲ್ಲಿ ಇಲಿಯಂತಾದರೆ ಏನು ಪ್ರಯೋಜನ? ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ಹಾಕು ಮಣೆ-ನೂಕು ಮಣೆ-ಯಾಕೆ ಮಣೆ? ಎಂಬಂತೆ ಸತ್ಕಾರ ಮಾಡುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…