ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ಮನೆಯಲ್ಲಿ ಹುಲಿ, ಬೀದಿಯಲ್ಲಿ ಇಲಿಯಂತಾದರೆ ಏನು ಪ್ರಯೋಜನ? ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ಹಾಕು ಮಣೆ-ನೂಕು ಮಣೆ-ಯಾಕೆ ಮಣೆ? ಎಂಬಂತೆ ಸತ್ಕಾರ ಮಾಡುತ್ತದೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…