ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ ತಕ್ಷಣ ಬಿಟ್ಟುಕೊಡಬೇಕೆ. ಮೂರು ಎಕರೆ ಹದಿನಾರು ಗುಂಟೆ ಸಿಎಂ ಅವರ ಪತ್ನಿ ಜಾಗವಾಗಿದೆ. ಈ ಅತಿಕ್ರಮಣ ಬಗ್ಗೆ ಮುಡಾ ಕೂಡಾ ತಪ್ಪೊಪ್ಪಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.
50:50 ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಬದಲಿ ಜಾಗವನ್ನು ಒಪ್ಪಿದ್ದಾರೆ. ಆ ಪ್ರಕಾರ ಹೋಗುವುದಾದರೇ ಸಿಎಂ ಅವರು ಕೋರ್ಟ್ ಮೆಟ್ಟಿಲೇರಿ ಜಾಗ ವಾಪಾಸ್ ಕೇಳಬೇಕಿತ್ತು. ಆದರೆ ಸಿಎಂ ಅವರು ಹಾಗೇ ಮಾಡಿಲ್ಲ ಎಂದು ಹೇಳಿದರು. ಜತೆಗೆ ಸಿಎಂ ಅವರು ಬದಲಿ ಜಾಗವನ್ನು ಒಪ್ಪಿಕೊಂಡ ಮೇಲೆ ಇದರಲ್ಲಿ ಭ್ರಷ್ಟಾಚಾರ ಎಲ್ಲಿಂದ ಬರುತ್ತದೆ. ಬಿಜೆಪಿ ಅವರ ಕಥೆಗಳನ್ನು ತೆಗೆದಾಗ ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…