ಬೆಳಗಾವಿ: ರಾಜ್ಯದಲ್ಲಿ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಇಂದು(ಡಿಸೆಂಬರ್.16) ಸದನದಲ್ಲಿಉತ್ತರಿಸಿದ ಅವರು, ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳಲ್ಲಿ ತಪಾಸಣೆ ಜಾಸ್ತಿ ಮಾಡಿರುವುದರಿಂದ ಹೆಚ್ಚು ಭ್ರೂಣ ಹತ್ಯೆಯ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯುವುದಕ್ಕಾಗಿ ಸರ್ಕಾರ ಗರ್ಭಧಾರಣೆಯ ಪೂರ್ವ ಮತ್ತು ಪ್ರಸವ ರೋಗನಿರ್ಣಯ ತಂತ್ರ ಕಾಯಿದೆ ಅಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇಕಡಾ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ʼಬಾಲಿಕಾʼ ಆನ್ಲೈನ್ ಸಾಫ್ಟ್ವೇರ್ ಮೂಲಕ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ನೋಂದಣಿ ನಡೆಸಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಪಿ.ಸಿ ಮತ್ತು ಪಿ.ಎನ್.ಡಿ.ಟಿ. ಕಾಯ್ದೆ ಉಲ್ಲಂಘಿಸಿದ ಸ್ಕ್ಯಾನಿಂಗ್ ಸೆಂಟರ್, ಮಾಲೀಕರು, ವೈದ್ಯರ ಮೇಲೆ 136 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.ಇದರಲ್ಲಿ 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿದೆ ಎಂದಿದ್ದಾರೆ.
ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಜೊತೆಗೆ ಭ್ರೂಣ ಹತ್ಯೆ ತಡೆಯಲು ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಪರಿಣಾಮಕಾರಿಯಾಗಿಸಲು ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆ ರಚಿಸಲಾಗಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…