ರಾಜ್ಯ

ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣ ದಾಖಲು: ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಇಂದು(ಡಿಸೆಂಬರ್‌.16) ಸದನದಲ್ಲಿಉತ್ತರಿಸಿದ ಅವರು, ರಾಜ್ಯದಲ್ಲಿ ಸ್ಕ್ಯಾನಿಂಗ್‌ ಸೆಂಟರ್‌ ಮತ್ತು ಆಸ್ಪತ್ರೆಗಳಲ್ಲಿ ತಪಾಸಣೆ ಜಾಸ್ತಿ ಮಾಡಿರುವುದರಿಂದ ಹೆಚ್ಚು ಭ್ರೂಣ ಹತ್ಯೆಯ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯುವುದಕ್ಕಾಗಿ ಸರ್ಕಾರ ಗರ್ಭಧಾರಣೆಯ ಪೂರ್ವ ಮತ್ತು ಪ್ರಸವ ರೋಗನಿರ್ಣಯ ತಂತ್ರ ಕಾಯಿದೆ ಅಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶೇಕಡಾ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ʼಬಾಲಿಕಾʼ ಆನ್‌ಲೈನ್‌ ಸಾಫ್ಟ್‌ವೇರ್‌ ಮೂಲಕ ಎಲ್ಲಾ ಸ್ಕ್ಯಾನಿಂಗ್‌ ಸೆಂಟರ್‌ಗಳನ್ನು ನೋಂದಣಿ ನಡೆಸಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಪಿ.ಸಿ ಮತ್ತು ಪಿ.ಎನ್‌.ಡಿ.ಟಿ. ಕಾಯ್ದೆ ಉಲ್ಲಂಘಿಸಿದ ಸ್ಕ್ಯಾನಿಂಗ್‌ ಸೆಂಟರ್‌, ಮಾಲೀಕರು, ವೈದ್ಯರ ಮೇಲೆ 136 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.ಇದರಲ್ಲಿ 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿದೆ ಎಂದಿದ್ದಾರೆ.

ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಜೊತೆಗೆ ಭ್ರೂಣ ಹತ್ಯೆ ತಡೆಯಲು ಪಿ.ಸಿ. ಮತ್ತು ಪಿ.ಎನ್‌.ಡಿ.ಟಿ ಕಾಯ್ದೆ ಪರಿಣಾಮಕಾರಿಯಾಗಿಸಲು ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆ ರಚಿಸಲಾಗಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago