ರಾಜ್ಯ

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವುದು ಬೇಡ, ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರ ವಹಿಸಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ.ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago