ರಾಯಚೂರು: ಈ ಬಾರಿ ರಾಜ್ಯದಲ್ಲ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೂ ಹೊರಗೆ ಕೆಲಸ ಮಾಡದೇ ಮನೆ ಮತ್ತು ಕಚೇರಿಯಲ್ಲಿಯೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಯಚೂರಿನ ಮಾನ್ವಿಯಲ್ಲಿ ಇಂದು(ಮಾರ್ಚ್.15) ಈ ಕುರಿತು ಮಾತನಾಡಿದ ಅವರು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯವನ್ನು ಬದಲಾವಣೆಯ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಮಾಡಲಿದೆ. ಸರ್ಕಾರಿ ಅಧಿಕಾರಿಗಳು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೂ ಫೀಲ್ಡ್ ವಿಸಿಟ್ ಹೋಗುವುದನ್ನು ಬಿಡಬೇಕು ಎಂದರು.
ಅವರು ಬೆಳಗಿನ ಜಾವ ಅಥವಾ ಸಾಯಂಕಾಲದ ಒತ್ತು ಹೊರಗಡೆ ವೀಕ್ಷಣೆ ಮಾಡುವುದನ್ನು ಇಟ್ಟುಕೊಳ್ಳಬೇಕು. ಅಲ್ಲದೇ ಸರ್ಕಾರದಿಂದ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಹೀಗಾಗಿ ರಜೆ ನೀಡಬೇಕೆಂದು ಹೇಳುವುದಿಲ್ಲ. ಆದರೆ ಸಮಯ ಬದಲಾವಣೆ ಮಾಡಿಕೊಂಡರೆ ಉತ್ತಮ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಹೆಚ್ಚಳವಾಗಲಿದೆ. ಈ ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ. ಇನ್ನು ಎಲ್ಲಾ ಶಾಲೆ-ಕಾಲೇಜುಗಳು ಹಾಗೂ ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅದರ ಜೊತೆಗೆ ಆಹಾರದ ಬಗ್ಗೆಯೂ ಗಮನ ನೀಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು ಎಂದು ತಿಳಿಸಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…