ರಾಜ್ಯ

ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ದಿನೇಶ್‌ ಗುಂಡೂರಾವ್‌

ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ಏಪ್ರಿಲ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ವಕ್ಫ್‌ ವಿಚಾರದಲ್ಲಿ ವಿರೋಧ ಪಕ್ಷವನ್ನೂ ಗಮನಕ್ಕೆ ತೆಗೆದುಕೊಳ್ಳದೇ ದಬ್ಬಾಳಿಕೆ ನಡೆಸಿದ್ದಾರೆ. ವಕ್ಫ್‌ ಮಸೂದೆ ಸೂಕ್ಷ್ಮವಾಗಿದ್ದು, ಅದರಲ್ಲಿ ದ್ವೇಷ ಸಾಧಿಸುವಂತಹದ್ದು ಸರಿಯಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಸಹ ಹಿಂದೂ ಧರ್ಮದ ಟ್ರಸ್ಟ್‌ಗಳು ಇದೆ. ಅಲ್ಲದೇ ಕೆಲವು ವಕ್ಫ್ ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿವೆ ಎಂದರು.

ಇದೇ ಸಂದರ್ಭದಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಇಂತಹ ವಿಚಾರಗಳೆಲ್ಲಾ ಗಂಭೀರ ಹಾಗೂ ಸೂಕ್ಷ್ಮವಾದ ವಿಷಯಗಳಾಗಿವೆ. ಒಂದೇ ಬಾರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಹೇಳಿದರು.

ಇನ್ನೂ ಯಾವುದೇ ಪ್ರಕರಣಗಳು ಕಾನೂನು ಪ್ರಕಾರವೇ ಮುಂದುವರಿಯಬೇಕು. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತಹದ್ದೂ ಏನೂ ಇಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

25 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

1 hour ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

1 hour ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago