ರಾಜ್ಯ

ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ದಿನೇಶ್‌ ಗುಂಡೂರಾವ್‌

ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ಏಪ್ರಿಲ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ವಕ್ಫ್‌ ವಿಚಾರದಲ್ಲಿ ವಿರೋಧ ಪಕ್ಷವನ್ನೂ ಗಮನಕ್ಕೆ ತೆಗೆದುಕೊಳ್ಳದೇ ದಬ್ಬಾಳಿಕೆ ನಡೆಸಿದ್ದಾರೆ. ವಕ್ಫ್‌ ಮಸೂದೆ ಸೂಕ್ಷ್ಮವಾಗಿದ್ದು, ಅದರಲ್ಲಿ ದ್ವೇಷ ಸಾಧಿಸುವಂತಹದ್ದು ಸರಿಯಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಸಹ ಹಿಂದೂ ಧರ್ಮದ ಟ್ರಸ್ಟ್‌ಗಳು ಇದೆ. ಅಲ್ಲದೇ ಕೆಲವು ವಕ್ಫ್ ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿವೆ ಎಂದರು.

ಇದೇ ಸಂದರ್ಭದಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಇಂತಹ ವಿಚಾರಗಳೆಲ್ಲಾ ಗಂಭೀರ ಹಾಗೂ ಸೂಕ್ಷ್ಮವಾದ ವಿಷಯಗಳಾಗಿವೆ. ಒಂದೇ ಬಾರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಹೇಳಿದರು.

ಇನ್ನೂ ಯಾವುದೇ ಪ್ರಕರಣಗಳು ಕಾನೂನು ಪ್ರಕಾರವೇ ಮುಂದುವರಿಯಬೇಕು. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತಹದ್ದೂ ಏನೂ ಇಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

7 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

12 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

12 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

13 hours ago