ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣದಲ್ಲಿ ಬಿಜೆಪಿಯವರು ಬಾಯಿ ಬಂದ ಹಾಗೇ ಮಾತನಾಡಿ, ಡ್ರಾಮಾ ಕಂಪೆನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡುರಾವ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು(ಡಿಸೆಂಬರ್.26) ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೆಲವೊಂದು ಘಟನೆಗಳು ಸಂಭವಿಸಿದೆ. ಅದಕ್ಕೆ ಈಗಾಗಲೇ ಪೊಲೀಸರು ಸಂಬಂಧಿತ ಆರೋಪಿಗಳನ್ನು ಆರೆಸ್ಟ್ ಮಾಡಿ, ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಪಕ್ಷ ನಾಟಕ ಕಂಪೆನಿ ರೀತಿಯಲ್ಲಿ ವರ್ತಿಸಿ, ಬಾಯಿಗೆ ಬಂದ ಹಾಗೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಯಾರಿಗೂ ಸಹ ಹಿಂಸಾತ್ಮಕವಾಗಿ ತೊಂದರೆಯನ್ನು ನೀಡಬಾರದು, ಆದರೆ ಈ ವಿಚಾರದಲ್ಲಿ ಹಾಗೇ ಆಗಿದೆ. ಅದಕ್ಕೆ ಸರ್ಕಾರದ ವಿರುದ್ಧ ಈ ರೀತಿ
ಕಪ್ಪೋಕಲ್ಪಿತ ಮಾತುಗಳನ್ನು ಸೇರಿಸಿ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನನ್ನ ಪ್ರಕಾರ ಶಾಸಕ ಮುನಿರತ್ನ ವಿಚಾರದಲ್ಲಿ ಈ ಘಟನೆ ಉಪ್ಪು ತಿಂದವರು, ನೀರು ಕುಡಿಯಬೇಕು ಎನ್ನುವ ಪರಿಸ್ಥಿತಿ ಎದುರಾದಂತೆ ಕಾಣುತ್ತಿದೆ. ಆದರೆ ಮುನಿರತ್ನ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಹಾಗೂ ಕುಸುಮಾ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಇನ್ನು ಈ ಮೂವರ ಬಗ್ಗೆ ಮುನಿರತ್ನ ಹೇಳಿಕೆಗಳನ್ನು ನೀಡಿರುವುದು ತಪ್ಪು. ಸಾರ್ವಜನಿಕರಿಗೆ ಈ ಬಗ್ಗೆ ನಿಜಾಂಶ ತಿಳಿದಿದೆ ಎಂದು ಹೇಳಿದ್ದಾರೆ.
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…