ರಾಜ್ಯ

ಬಿಜೆಪಿಯವರದ್ದು ಉಗ್ರಗಾಮಿ ಮನಸ್ಥಿತಿ: ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನನಗೆ ಬಹಳ ನೋವಾಗಿದೆ. ಒಬ್ಬ ಅಮಾಯಕನನ್ನು ಹೊಡೆದು ಸಾಯಿಸಲಾಗಿದೆ. ಅಲ್ಲಿ ಇನ್ನೂ ಹೆಚ್ಚಿನ ಜನರನ್ನು ಕೊಲ್ಲಲು ಆಲೋಚನೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿ ಉಗ್ರವಾದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಸ್ಲಿಮರನ್ನು ಟಾರ್ಗೆಟ್‌ ಮಾಡುವುದೇ ಬಿಜೆಪಿಯವರ ಕೆಲಸ. ಮುಸಲ್ಮಾನರು ಅಂದಾಕ್ಷಣ ಪಾಕಿಸ್ತಾನ ಎಂದು ಬಿಂಬಿಸಲಾಗುತ್ತಿದೆ. ಬಿಜೆಪಿಯವರೇ ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

30 mins ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

50 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

53 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

55 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

58 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

1 hour ago