ರಾಜ್ಯ

ಬಿಜೆಪಿಯವರದ್ದು ಉಗ್ರಗಾಮಿ ಮನಸ್ಥಿತಿ: ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನನಗೆ ಬಹಳ ನೋವಾಗಿದೆ. ಒಬ್ಬ ಅಮಾಯಕನನ್ನು ಹೊಡೆದು ಸಾಯಿಸಲಾಗಿದೆ. ಅಲ್ಲಿ ಇನ್ನೂ ಹೆಚ್ಚಿನ ಜನರನ್ನು ಕೊಲ್ಲಲು ಆಲೋಚನೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿ ಉಗ್ರವಾದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಸ್ಲಿಮರನ್ನು ಟಾರ್ಗೆಟ್‌ ಮಾಡುವುದೇ ಬಿಜೆಪಿಯವರ ಕೆಲಸ. ಮುಸಲ್ಮಾನರು ಅಂದಾಕ್ಷಣ ಪಾಕಿಸ್ತಾನ ಎಂದು ಬಿಂಬಿಸಲಾಗುತ್ತಿದೆ. ಬಿಜೆಪಿಯವರೇ ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

6 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

7 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

9 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

10 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

13 hours ago