ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣಾ ಆಖಾಡಕ್ಕೆ ಇಳಿಯಲು ಸಿದ್ದರಾಗಿದ್ದ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ಹಿಂಪಡೆಯುವ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ತಮ್ಮ ಸೂಚಕರಾದ ಸಚ್ಚಿನ್ ಪಾಟೀಲ ಮತ್ತು ಅಮೃತ ಬಳ್ಳೋಳ್ಳಿ ಅವರ ಮೂಲಕ ಚುನಾವಣೆಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ.
ಪ್ರಹ್ಲಾದ್ ಜೋಶಿ ಅವರಿಂದ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ಜೋಶಿ ಅವರಿಂದ ನೋವು ಅನುಭವಿಸಿದ ಜನರ ಧನಿಯಾಗಿ ಹೋರಾಟ ಮಾಡುತ್ತೇವೆ. ಇವರ ಆಡಳಿತದಿಂದ ಅಭಿವೃದ್ಧಿಯ ವಿನಾಶವಾಗಲಿದೆ. ಲಿಂಗಾಯಿತ ಸಮುದಾಯದ ಹಿರಿಯರಾದ ಜಗದೀಶ್ ಶೆಟ್ಟರನ್ನು ಸರಿಯಾಗಿ ನೋಡಿಕೊಂಡಿಲ್ಲ ಹಾಗಾಗಿ ಜೋಶಿ ವಿರುದ್ಧ ಚುನಾವಣೆಗೆ ನಿಲ್ಲುವುದಾಗಿ ಶ್ರೀಗಳು ಹೇಳಿದ್ದರು.
ಒಲಿದ ಸಿಎಂ-ಡಿಸಿಎಂ ಮಂತ್ರ: ಇನ್ನು ದಿಂಗಾಲೇಶ್ವರ ಸ್ವಾಮಿಗಳು ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ಡಿಸಿಎಂ ಅವರು ಶ್ರೀಗಳೊಂದಿಗೆ ಮಾತನಾಡಿದ್ದಾರೆ. ನೀವು ಚುನಾವಣೆಗೆ ಸ್ಪರ್ಧೆ ಮಾಡುವುದರಿಂದ ನಮ್ಮ ಅಭ್ಯರ್ಥಿಗೆ ಹೊಡೆತ ಬೀಳಲಿದೆ. ನೀವು ಸ್ಪರ್ಧಿಸುವ ಬಗ್ಗೆ ಮೊದಲೇ ಹೇಳಿದ್ದರೇ ನಾವೇ ಅನುಕೂಲ ಮಾಡಿಕೊಡುತ್ತಿದ್ದೆವು. ಈ ಬಾರಿ ವಿನೋದ್ ಅಸೂಟಿಯನ್ನು ಕಾಂಗ್ರೆಸ್ನಿಂದ ನಿಲ್ಲಿಸಿದ್ದು, ಅವರಿಗೆ ನಿಮ್ಮ ಬೆಂಬಲದ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.
ಸಿಎಂ, ಡಿಸಿಎಂ ಅವರ ಮನವಿಗೆ ಒಪ್ಪಿದ ಶ್ರೀಗಳು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಚದುರುತ್ತಿದ್ದ ಕಾಂಗ್ರೆಸ್ ಮತಗಳು ಒಂದೆಡೆಗೆ ಕೇಂದ್ರೀಕೃತಗೊಂಡಿದೆ. ಇದು ಬಿಜೆಪಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…