ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣಾ ಆಖಾಡಕ್ಕೆ ಇಳಿಯಲು ಸಿದ್ದರಾಗಿದ್ದ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ಹಿಂಪಡೆಯುವ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ತಮ್ಮ ಸೂಚಕರಾದ ಸಚ್ಚಿನ್ ಪಾಟೀಲ ಮತ್ತು ಅಮೃತ ಬಳ್ಳೋಳ್ಳಿ ಅವರ ಮೂಲಕ ಚುನಾವಣೆಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ.
ಪ್ರಹ್ಲಾದ್ ಜೋಶಿ ಅವರಿಂದ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ಜೋಶಿ ಅವರಿಂದ ನೋವು ಅನುಭವಿಸಿದ ಜನರ ಧನಿಯಾಗಿ ಹೋರಾಟ ಮಾಡುತ್ತೇವೆ. ಇವರ ಆಡಳಿತದಿಂದ ಅಭಿವೃದ್ಧಿಯ ವಿನಾಶವಾಗಲಿದೆ. ಲಿಂಗಾಯಿತ ಸಮುದಾಯದ ಹಿರಿಯರಾದ ಜಗದೀಶ್ ಶೆಟ್ಟರನ್ನು ಸರಿಯಾಗಿ ನೋಡಿಕೊಂಡಿಲ್ಲ ಹಾಗಾಗಿ ಜೋಶಿ ವಿರುದ್ಧ ಚುನಾವಣೆಗೆ ನಿಲ್ಲುವುದಾಗಿ ಶ್ರೀಗಳು ಹೇಳಿದ್ದರು.
ಒಲಿದ ಸಿಎಂ-ಡಿಸಿಎಂ ಮಂತ್ರ: ಇನ್ನು ದಿಂಗಾಲೇಶ್ವರ ಸ್ವಾಮಿಗಳು ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ಡಿಸಿಎಂ ಅವರು ಶ್ರೀಗಳೊಂದಿಗೆ ಮಾತನಾಡಿದ್ದಾರೆ. ನೀವು ಚುನಾವಣೆಗೆ ಸ್ಪರ್ಧೆ ಮಾಡುವುದರಿಂದ ನಮ್ಮ ಅಭ್ಯರ್ಥಿಗೆ ಹೊಡೆತ ಬೀಳಲಿದೆ. ನೀವು ಸ್ಪರ್ಧಿಸುವ ಬಗ್ಗೆ ಮೊದಲೇ ಹೇಳಿದ್ದರೇ ನಾವೇ ಅನುಕೂಲ ಮಾಡಿಕೊಡುತ್ತಿದ್ದೆವು. ಈ ಬಾರಿ ವಿನೋದ್ ಅಸೂಟಿಯನ್ನು ಕಾಂಗ್ರೆಸ್ನಿಂದ ನಿಲ್ಲಿಸಿದ್ದು, ಅವರಿಗೆ ನಿಮ್ಮ ಬೆಂಬಲದ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.
ಸಿಎಂ, ಡಿಸಿಎಂ ಅವರ ಮನವಿಗೆ ಒಪ್ಪಿದ ಶ್ರೀಗಳು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಚದುರುತ್ತಿದ್ದ ಕಾಂಗ್ರೆಸ್ ಮತಗಳು ಒಂದೆಡೆಗೆ ಕೇಂದ್ರೀಕೃತಗೊಂಡಿದೆ. ಇದು ಬಿಜೆಪಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…