ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರ ಮೇಲಿನ ಗೌರವದಿಂದಾಗಿ ನಾವು ನಿನ್ನೆ ಆಹ್ವಾನದ ಮೇರೆಗೆ ಊಟಕ್ಕೆ ಹೋಗಿದ್ದೆವು. ಇದು ಯಾವುದೇ ಔತಣಕೂಟದ ಸಭೆ ಅಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇದನ್ನು ಓದಿ: ಎಸ್ಸಿ,ಎಸ್ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ
ಈ ಸಭೆಯನ್ನು ಶಕ್ತಿ ಪ್ರದರ್ಶನ ಎಂದು ಭಾವಿಸಬೇಕಿಲ್ಲ. ನನ್ನ ಪರವಾಗಿ ಯಾರು ಮಾತನಾಡುವ ಅವಶ್ಯಕತೆ ಇಲ್ಲ. 140 ಮಂದಿ ಶಾಸಕರು ಒಂದೇ, ಮುಖ್ಯಮಂತ್ರಿ ಹಾಗೂ ನಾನು ಎಲ್ಲರೂ ಒಂದೇ ಗುಂಪು ಎಂದರು.
ಡಾ.ಯತೀಂದ್ರ ಸಿದ್ರಾಮಯ್ಯ ಅವರ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿಯವರೇ ಪ್ರತಿಕ್ರಿಯೆ ನೀಡುತ್ತಾರೆ ಎಂದು ಜಾರಿಕೊಂಡರು.
ಇದೇ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಿಂಡಲಗದಲ್ಲಿ ಕಾಂಗ್ರೆಸ್? ಕಚೇರಿ ಹಾಗೂ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…