ಬೆಂಗಳೂರು: ರಾಜ್ಯಾದ್ಯಂತ ಏಡ್ಸ್ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್ವರೆಗೆ 7,720 ಪ್ರಕರಣಗಳು ಮಾತ್ರ ದಾಖಲಾಗಿವೆ.
ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು ಪ್ರಕರಣಗಳು ಧೃಡಪಟ್ಟಿದ್ದವು. ಈ ವರ್ಷದ ಆಕ್ಟೋಬರ್ವರೆಗೆ 247 ಮಾತ್ರ ವರದಿಯಾಗಿವೆ. ಗರ್ಭಿಣಿ ಮಹಿಳೆಯರಲ್ಲಿ ಸೋಂಕು ಧೃಡಪ್ರಮಾಣ ಶೇ.0.03ರಷ್ಟಿದೆ. ಇದನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ಇಳಿಸುವ ಗುರಿಯಿದೆ ಎಂದು ಹೇಳಿದರು.
ಏಡ್ಸ್ ಸೋಂಕು ಪ್ರಮಾಣವು ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಡ್ರಗ್ಸ್ ವ್ಯಸನಿಗಳಲ್ಲಿ ಹೆಚ್ಚಿದೆ. ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಮಾರಣಾಂತಿಕ ಕಾಯಿಲೆಯಿಂದ ಪಾರಾಗಬಹುದು. ಲೈಂಗಿಕ ಕಾರ್ಯಕರ್ತರನ್ನು ಸಾಮಾಜಿಕ ಮುಖ್ಯ ವಾಹಿನಿಗೆ ತರಬೇಕು. ಅವರು ದೂರವಿರುವುದೇ ಈ ಸಮಸ್ಯೆಗಳು ಹೆಚ್ಚಾಗಲು ಕಾರಣ ವಾಗುತ್ತಿವೆ. ಅವರನ್ನು ಮಾನವೀಯತೆ ದೃಷ್ಟಿಯಿಂದ ನೋಡಿದರೆ ಮಾತ್ರ ಸೋಂಕಿನ ಪ್ರಮಾಣ ತಡೆಗಟ್ಟಲು ಸಾಧ್ಯ ಎಂದರು.
ರಾಜ್ಯದಲ್ಲಿ ಚಿಕಿತ್ಸೆ, ಆಪ್ತ ಸಮಾಲೋಚನಾ ಕೇಂದ್ರಗಳ ಸಹಕಾರದಿಂದ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಏಡ್ಸ್ ಸೋಂಕನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ನಾವೆಲ್ಲಾ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.
ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಆಪ್ತ ಸಮಾಲೋಚನಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…