ರಾಜ್ಯ

ರಾಜ್ಯದಲ್ಲಿ ಏಡ್ಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ: ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 7,720 ಪ್ರಕರಣಗಳು ಮಾತ್ರ ದಾಖಲಾಗಿವೆ.

ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು ಪ್ರಕರಣಗಳು ಧೃಡಪಟ್ಟಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 247 ಮಾತ್ರ ವರದಿಯಾಗಿವೆ. ಗರ್ಭಿಣಿ ಮಹಿಳೆಯರಲ್ಲಿ ಸೋಂಕು ಧೃಡಪ್ರಮಾಣ ಶೇ.0.03ರಷ್ಟಿದೆ. ಇದನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ಇಳಿಸುವ ಗುರಿಯಿದೆ ಎಂದು ಹೇಳಿದರು.

ಏಡ್ಸ್‌ ಸೋಂಕು ಪ್ರಮಾಣವು ಟ್ರಕ್‌ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಡ್ರಗ್ಸ್‌ ವ್ಯಸನಿಗಳಲ್ಲಿ ಹೆಚ್ಚಿದೆ. ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಮಾರಣಾಂತಿಕ ಕಾಯಿಲೆಯಿಂದ ಪಾರಾಗಬಹುದು. ಲೈಂಗಿಕ ಕಾರ್ಯಕರ್ತರನ್ನು ಸಾಮಾಜಿಕ ಮುಖ್ಯ ವಾಹಿನಿಗೆ ತರಬೇಕು. ಅವರು ದೂರವಿರುವುದೇ ಈ ಸಮಸ್ಯೆಗಳು ಹೆಚ್ಚಾಗಲು ಕಾರಣ ವಾಗುತ್ತಿವೆ. ಅವರನ್ನು ಮಾನವೀಯತೆ ದೃಷ್ಟಿಯಿಂದ ನೋಡಿದರೆ ಮಾತ್ರ ಸೋಂಕಿನ ಪ್ರಮಾಣ ತಡೆಗಟ್ಟಲು ಸಾಧ್ಯ ಎಂದರು.

ರಾಜ್ಯದಲ್ಲಿ ಚಿಕಿತ್ಸೆ, ಆಪ್ತ ಸಮಾಲೋಚನಾ ಕೇಂದ್ರಗಳ ಸಹಕಾರದಿಂದ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಏಡ್ಸ್‌ ಸೋಂಕನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ನಾವೆಲ್ಲಾ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಆಪ್ತ ಸಮಾಲೋಚನಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago