ರಾಜ್ಯ

ರಾಜ್ಯದಲ್ಲಿ ಏಡ್ಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ: ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 7,720 ಪ್ರಕರಣಗಳು ಮಾತ್ರ ದಾಖಲಾಗಿವೆ.

ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು ಪ್ರಕರಣಗಳು ಧೃಡಪಟ್ಟಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 247 ಮಾತ್ರ ವರದಿಯಾಗಿವೆ. ಗರ್ಭಿಣಿ ಮಹಿಳೆಯರಲ್ಲಿ ಸೋಂಕು ಧೃಡಪ್ರಮಾಣ ಶೇ.0.03ರಷ್ಟಿದೆ. ಇದನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ಇಳಿಸುವ ಗುರಿಯಿದೆ ಎಂದು ಹೇಳಿದರು.

ಏಡ್ಸ್‌ ಸೋಂಕು ಪ್ರಮಾಣವು ಟ್ರಕ್‌ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಡ್ರಗ್ಸ್‌ ವ್ಯಸನಿಗಳಲ್ಲಿ ಹೆಚ್ಚಿದೆ. ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಮಾರಣಾಂತಿಕ ಕಾಯಿಲೆಯಿಂದ ಪಾರಾಗಬಹುದು. ಲೈಂಗಿಕ ಕಾರ್ಯಕರ್ತರನ್ನು ಸಾಮಾಜಿಕ ಮುಖ್ಯ ವಾಹಿನಿಗೆ ತರಬೇಕು. ಅವರು ದೂರವಿರುವುದೇ ಈ ಸಮಸ್ಯೆಗಳು ಹೆಚ್ಚಾಗಲು ಕಾರಣ ವಾಗುತ್ತಿವೆ. ಅವರನ್ನು ಮಾನವೀಯತೆ ದೃಷ್ಟಿಯಿಂದ ನೋಡಿದರೆ ಮಾತ್ರ ಸೋಂಕಿನ ಪ್ರಮಾಣ ತಡೆಗಟ್ಟಲು ಸಾಧ್ಯ ಎಂದರು.

ರಾಜ್ಯದಲ್ಲಿ ಚಿಕಿತ್ಸೆ, ಆಪ್ತ ಸಮಾಲೋಚನಾ ಕೇಂದ್ರಗಳ ಸಹಕಾರದಿಂದ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಏಡ್ಸ್‌ ಸೋಂಕನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ನಾವೆಲ್ಲಾ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಆಪ್ತ ಸಮಾಲೋಚನಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

4 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

4 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

4 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

4 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

4 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

7 hours ago