ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ʼಮಂಡ್ಯದ ಗಂಡುʼ ಸಿನಿಮಾದ ಹಿರಿಯ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ತಮ್ಮ ವೃತ್ತಿ ಬದುಕಿನಲ್ಲಿ ಸುಮಾರು 32 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಮಡಿಕೇರಿಯಲ್ಲಿ ಜನಿಸಿದ ರಘು ಅವರು ʼಮಿಸ್ ಲೀಲಾವತಿʼ ಎಂಬ ಸಿನಿಮಾದಲ್ಲಿ ಸಣ್ಣ ಪಾತ್ರವೊಂದಕ್ಕೆ ಬಣ್ಣ ಹಚ್ಚುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
ನಂತರ, ʼನ್ಯಾಯ ನೀತಿ ಧರ್ಮʼ ಸಿನಿಮಾ ಮೂಲಕ ನಿರ್ದೇಶಕರಾದ ರಘು, ಅಂಬರೀಶ್ ಅವರಿಗೆ ಆಕ್ಷನ್ ಕಟ್ ಹೇಳಿದರು.
ಬಳಿಕ, ʼಶಂಕರ್ ಸುಂದರ್ʼ, ʼಪ್ರೀತಿʼ, ʼಆಶಾʼ, ʼಇನ್ಸ್ಪೆಕ್ಟರ್ ಕ್ರಾಂತಿಕುಮಾರ್ʼ, ಮುಂತಾದ ಸಿನಿಮಾಗಳನ್ನು ರಘು ನಿರ್ದೇಶಿಸಿದರು. ಟೈಗರ್ ಪ್ರಭಾಕರ್ ನಟಿಸಿದ ʼಕಾಡಿನ ರಾಜʼ ಸಿನಿಮಾವನ್ನೂ ರಘು ನಿರ್ದೇಶಿಸಿದ್ದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…