ರಾಜ್ಯ

ಸಮೀಕ್ಷಾ ಕರ್ತವ್ಯದಿಂದ ವಿಮುಕ್ತರಾಗುವ ನೌಕರರ ಮೇಲೆ ಶಿಸ್ತು ಕ್ರಮ : ಸಚಿವ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ : ಗ್ರೇಟರ್‌ ಬೆಂಗಳೂರು ತಿದ್ದುಪಡಿ ಮಸೂದೆ ವಿಧಾನಪರಿಷತ್‌ನಲ್ಲೂ ಅಂಗೀಕಾರ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

3 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

3 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

4 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

4 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

5 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

5 hours ago