ರಾಜ್ಯ

ಸಮೀಕ್ಷಾ ಕರ್ತವ್ಯದಿಂದ ವಿಮುಕ್ತರಾಗುವ ನೌಕರರ ಮೇಲೆ ಶಿಸ್ತು ಕ್ರಮ : ಸಚಿವ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ : ಗ್ರೇಟರ್‌ ಬೆಂಗಳೂರು ತಿದ್ದುಪಡಿ ಮಸೂದೆ ವಿಧಾನಪರಿಷತ್‌ನಲ್ಲೂ ಅಂಗೀಕಾರ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago