DCM DK Shivakumar
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದರು.
ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ” ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ” ಎಂದು ತಿಳಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…