DCM DK Shivakumar
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದರು.
ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ” ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ” ಎಂದು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…