ರಾಜ್ಯ

ವಾಹನ ಸವಾರರ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ

ಬೆಂಗಳೂರು : ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ನವೆಂಬರ್ 20 ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.

ಇದನ್ನೂ ಓದಿ:-ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಎಲ್ಲಿ ದಂಡ ಕಟ್ಟಬೇಕು?
ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್‌ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್‌ ಹಾಗೂ ಬೆಂಗಳೂರು ಒನ್‌ ವೆಬ್‌ಸೈಟ್‌ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್‌ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್‌ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

11 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

56 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago