ರಾಜ್ಯ

ವಾಹನ ಸವಾರರ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ

ಬೆಂಗಳೂರು : ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ನವೆಂಬರ್ 20 ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.

ಇದನ್ನೂ ಓದಿ:-ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಎಲ್ಲಿ ದಂಡ ಕಟ್ಟಬೇಕು?
ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್‌ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್‌ ಹಾಗೂ ಬೆಂಗಳೂರು ಒನ್‌ ವೆಬ್‌ಸೈಟ್‌ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್‌ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್‌ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago